ರಾಮನಗರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನೀತಿ ಸಂಹಿತೆ ಜಾರಿಯಾದ 24 ತಾಸಿನಲ್ಲೇ ಮುಂಬರುವ ವಿಧಾನಸಭಾ ಚುನಾವಣೆಯ ಮಾಗಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ. ಮಂಜುನಾಥ್ ತಮ್ಮ ಜಿ.ಪಂ. ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಾಗಡಿ ತಾಲೂಕಿನ ಕುದೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಎ. ಮಂಜುನಾಥ್ ಜಿ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮಂಜುನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ರಾಮನಗರ ಜಿಲ್ಲಾ ಪಂಚಾಯಿತಿಗೆ