ಬೆಳಗಾವಿ : ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.ಮಹದಾಯಿ ಯೋಜನೆ ಜಾರಿಗೆ ತಯಾರಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ನಮಗೆ ಕೇಂದ್ರದಿಂದ ಅನುಮತಿ ಸಿಗುವ ವಿಶ್ವಾಸವಿದೆ. ನಮ್ಮ ಅಧಿಕಾರಿಗಳು ಕೂಡ ಯೋಜನೆ ಜಾರಿಗಾಗಿ ಕಾರ್ಯಪ್ರವೃತರಾಗಿದ್ದಾರೆ.ನಮ್ಮ ಸರ್ಕಾರ ಎಲ್ಲ ನೀರಾವರಿ ಯೋಜನೆ ಜಾರಿಗೆ ಪ್ರಯತ್ನ ಮಾಡುತ್ತಿದೆ. ಮೇಕೆದಾಟು, ಭದ್ರಾ, ಕೃಷ್ಣಾದಲ್ಲಿ ನಮಗೆ ಹಂಚಿಕೆಯಾದ ನೀರು ಬಳಕೆಗೆ ಅವಕಾಶ ಕೋರಿದ್ದೇವೆ