ಮಂಡ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಿರುವ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆಯ ಕ್ರಮದಿಂದ ಮಂಡ್ಯ ಜಿಲ್ಲೆಯ ರೈತರು ಖುಷ್ ಆಗಿದ್ದಾರೆ.ಕಾರ್ಖಾನೆಯಲ್ಲಿ ಹಬ್ಬದ ವಾತಾವರಣವಿತ್ತು. ವಿಶೇಷ ಪೂಜೆ ಹೋಮ-ಹವನ ನಡೆಸಿ ಕಬ್ಬು ಅರೆಯುವಿಕೆ ಕಾರ್ಯಕ್ಕೆ ಚಾಲನೆ ನೀಡಿದ್ರು ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ರವಿರೆಡ್ಡಿ.ಮಂಡ್ಯ, ಕೆ.ಆರ್.ಪೇಟೆ, ಪಾಂಡವಪುರ ರೈತರ ಜೀವನಾಡಿಯಾಗಿ ಆತ್ಮೀಯ ಬಂಧುವಿನಂತೆ ಕೆಲಸ ಮಾಡುತ್ತಿರುವ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆ ಯು ಪ್ರಸಕ್ತ ಹಂಗಾಮಿನ ಕಬ್ಬು