ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರನ್ನು ಖಾಸಗೀಕರಣ ಗೊಳಿಸಲು ಮುಂದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎ. ಸಿ. ವಿನಯರಾಜ್ ಆರೋಪಿಸಿದ್ದಾರೆ.ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿನಯರಾಜ್, ಬಿಜೆಪಿಯವರು ಚುನಾವಣೆ ಸಮೀಪಿಸುತ್ತಿದಂತೆಯೇ ಕರಾವಳಿ ಭಾಗಕ್ಕೆ ಹಲವು ಕೊಡುಗೆ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಎಣ್ಣೆ ಹೊಳೆಯಿಂದ ಬಿ.ಸಿ.ರೋಡ್ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಅರ್ಧದಲ್ಲಿಯೇ ಸ್ಥಗಿತಗೊಂಡಿದೆ. ಕಿದು