ಮುಂಬೈ : ವಿರೋಧ ಪಕ್ಷಗಳನ್ನು ಟೀಕೆ ಮಾಡುತ್ತಿರುವ ಮೋದಿ ಸರ್ಕಾರದ ಮೇಲೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ. ಮಹಾರಾಷ್ಟ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ಹಿಂಜರಿತಕ್ಕೆ ಕಾರಣವಾದ ಅಂಶಗಳನ್ನು ವಿಶ್ಲೇಷಿಸಿ ಆರ್ಥಿಕತೆಯನ್ನು ಸರಿಪಡಿಸಲು ಕ್ರಮ ಕೈಗೊಳ್ಳುವ ಬದಲು ಕೇಂದ್ರ ಸರ್ಕಾರ ಪ್ರತಿಪಕ್ಷಗಳನ್ನು ದೂರುವುದರಲ್ಲಿಯೇ ನಿರತರಾಗಿದ್ದಾರೆ. ಹೀಗೆ ಮಾಡಿದರೆ ಆರ್ಥಿಕತೆ ಸುಧಾರಣೆ ಕಾಣುವುದಿಲ್ಲ ಎಂದು ಗುಡುಗಿದ್ದಾರೆ. ಅಲ್ಲದೆ ಈ ಆರ್ಥಿಕ ಹಿಂಜರಿತದಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಕೈಗಾರಿಕಾ