ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಇಂದಿನಿಂದ ಮೂರು ದಿನಗಳ ಕಾಲ ಜೆ.ಕೆ.ಮೈದಾನದಲ್ಲಿ ರೈತ ದಸರಾ ನಡೆಯಲಿದೆ. ಈ ನಿಟ್ಟಿನಲ್ಲಿ ಅರಮನೆ ಮುಂಭಾಗ ಕೋಟೆ ಅಂಜನೇಯಸ್ವಾಮಿ ಮುಂಭಾಗ ರೈತದಸರಾ ಮೆರವಣಿಗೆಗೆ ಚಾಲನೆ ನೀಡಿದರು. ರೈತರಿಗೆ ಉಪಯುಕ್ತವಾಗುವ ನೀರು ಸಂರಕ್ಷಣೆ, ತೋಟಗಾರಿಕೆ ಇಲಾಖೆ, ಕೃಷಿ ಅಭಿಯಾನ, ಕ್ಷೀರ ಭಾಗ್ಯ,ಮೀನುಗಾರಿಕೆ ಇಲಾಖೆಗಳ ಸ್ಥಬ್ಧ ಚಿತ್ರಗಳು, ಎತ್ತಿನ ಗಾಡಿ, ಸಾಕು ಪ್ರಾಣಿಗಳಾದ ಕುರಿ ಸೇರಿದಂತೆ ನಂದಿ ಕಂಬ, ಕುಂಭ ಹೊತ್ತ ಮಹಿಳೆಯರು, ಸಾಂಸ್ಕೃತಿಕ ಕಲಾ ತಂಡಗಳು ಎಲ್ಲರ