ಮೈಸೂರು: ಶಾಸಕರು, ಸಚಿವರು ಎಂದ್ರೆ ಐಷಾರಾಮಿ ಜೀವನ ನಡೆಸುವವರು ಎಂದು ಜನಸಾಮಾನ್ಯರ ಭಾವನೆ. ದೊಡ್ಡ ದೊಡ್ಡ ಹೋಟೆಲ್ ಗಳಲ್ಲಿ ಊಟ, ಲಕ್ಷುರಿ ಕಾರುಗಳಲ್ಲಿ ಓಡಾಟ ಕಾಮನ್. ಆದರೆ ಇಲ್ಲೊಬ್ಬ ಸಚಿವರು ಪುಟ್ಟ ಟೀ ಅಂಗಡಿಯಲ್ಲಿ ಉಪಹಾರ ಸೇವಿಸಿ ಸರಳತೆ ಮೆರೆದಿದ್ದಾರೆ. ಅವರೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್. ದಸರಾ ಉದ್ಘಾಟನೆಗೂ ಮುನ್ನ ಎಲ್ಲರ ಕುತೂಹಲಕ್ಕೆ ಕಾರಣರಾದವರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ದಸರಾ ಮಹೋತ್ಸವದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು