ಅಪ್ಪ-ಅಮ್ಮನ ಗುರುತು ಇಲ್ಲದೇ ಇರುವ ರಕ್ತವನ್ನು ಹೊಂದಿರುವವರು ಜಾತ್ಯಾತೀತರು ಅಂತ ಕರೆದುಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೊಸದೊಂದು ಸಂಪ್ರದಾಯ ಬಂದುಬಿಟ್ಟಿದೆ. ಅದ್ಯಾವುದೆಂದರೆ ಜಾತ್ಯಾತೀತರು, ತಮ್ಮ ಗುರುತೇ ತಮಗಿರುವುದಿಲ್ಲ. ಮಾತೇತ್ತಿದ್ರೆ ದೊಡ್ಡ ವಿಚಾರವಾದಿಗಳು ಎಂದು ಹೇಳಿಕೊಳ್ಳುವುದು. ಜಾತ್ಯಾತೀತರು ಅಂತ ಹೇಳಿದ್ರೆ ಮಾತ್ರ ಸ್ವಲ್ಪ ನೀವು ಯಾರು ಅಂತ