ಮಾಧ್ಯಮಗಳ ವಿರುದ್ಧ ಹಾಗೂ ಹಿಂದುಳಿದ ವರ್ಗಗಳ ಸಚಿವ ಸಿ.ಪುಟ್ಟರಂಗಶೆಟ್ಟಿ ಪರವಾಗಿ ಬೃಹತ್ ಪ್ರತಿಭಟನೆ ನಡೆಯಿತು.ಚಾಮರಾಜನಗರ ನಗರದ ಪಚ್ಚಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಚಿವರ ಬೆಂಬಲಿಗರು, ಕೆಲವು ಖಾಸಗಿ ವಾಹಿನಿಗಳ ನಿರೂಪಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ನಗರಸಭಾ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಸಚಿವ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಕ್ಕೆ ಸೇರಿದವರಾದ್ದರಿಂದ ಅವರನ್ನು ಮಾಧ್ಯಮಗಳು ಟಾರ್ಗೆಟ್ ಮಾಡಿವೆ. ವಿಧಾನಸೌಧದಲ್ಲಿ ಸಿಕ್ಕಿದ ಹಣದಲ್ಲಿ ಸಚಿವರ ಪಾತ್ರವಿಲ್ಲದಿದ್ರೂ ಸಹ ಮಾಧ್ಯಮಗಳು