ಬೆಂಗಳೂರು: ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಮನೆ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದಾರೆ. ತನ್ವೀರ್ ಸೇಠ್ ಅವರ ಸರ್ಕಾರಿ ಬಂಗಲೆ ಮೇಲೆ ದಾಳಿ ನಡೆಸಿರುವ ಕರವೇ ಕಾರ್ಯಕರ್ತರು ಮನೆಯ ಕಿಟಿಕಿ ಗಾಜುಗಳನ್ನು ಪುಡಿಗಟ್ಟಿದ್ದು, ಹೂ ಕುಂಡಗಳ ಒಡೆದು ದಾಂಧಲೆ ಎಬ್ಬಿಸಿದ್ದಾರೆ.ಕನ್ನಡ ಮಾಧ್ಯಮಗಳ ಹೆಸರಿನಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರು ಸಚಿವರ ವಿರುದ್ಧ