ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಬಗೆಹರಿಸಲು ಶಿಕ್ಷಕರು ಹಗಲಿರಲು ಹೋರಾಟ ನಡೆಸುತ್ತಿದ್ದರೂ ಸರಕಾರದ ಮೌನ ಧೋರಣೆ ತೀವ್ರ ಖಂಡನೀಯ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಶಿಕ್ಷಕರ ಮೇಲೆ ಸರಕಾರ ತೋರುತ್ತಿರುವ ಧೋರಣೆ ಖಂಡಿಸಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಒಂದು ವೇಳೆ, ಪ್ರತಿಭಟನೆ ಕೈ ಮೀರಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಸರಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರೂ ನಿರ್ಲಕ್ಷ್ಯ ತೋರುತ್ತಿರುವ ಸರಕಾರ,