ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ಜಗಳದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಂಧಿಸಿದ್ದಾರೆ. ತಿರುಪತಿ, ಧರ್ಮಸ್ಥಳದಲ್ಲೂ ಆರೋಪಿಗಳು ತಲೆಮರೆಸಿಕೊಂಡಿರುವ ಮಾಹಿತಿ ತಿಳಿದುಬಂದಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸ್ ಅಧೀಕ್ಷಕರು ರಚಿಸಿದ 6 ತನಿಖಾ ತಂಡಗಳು ಶೋಧಕಾರ್ಯದಲ್ಲಿ ತೊಡಗಿವೆ..ಘಟನೆಯ ನಂತರ