ಹಾಸನ : ನಂದಿನಿ ಉತ್ಪನ್ನಗಳನ್ನು ಖರೀದಿಸಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯದಲ್ಲಿ ಲಗ್ಗೆ ಇಡುತ್ತಿರುವ ಅಮುಲ್ ಉತ್ಪನ್ನಗಳಿಗೆ ವಿಭಿನ್ನವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಸನದ ಹೇಮಾವತಿ ಪ್ರತಿಮೆ ಬಳಿಯ ನಂದಿನಿ ಹಾಲಿನ ಕೇಂದ್ರದಲ್ಲಿ ಸುಮಾರು ಎರಡೂವರೆ ಸಾವಿರ ರೂ. ಮೌಲ್ಯದ ಉತ್ಪನ್ನಗಳನ್ನು ಖರೀದಿಸಿದ್ದಾರೆ. ಹಾಲು, ತುಪ್ಪ, ಮಜ್ಜಿಗೆ, ಮೈಸೂರ್ ಪಾಕ್ ಸೇರಿ ಹತ್ತಾರು ಉತ್ಪನ್ನ ಖರೀದಿ ಮಾಡಿ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಹಂಚಿದ್ದಾರೆ. ನಂದಿನಿ ಕೇಂದ್ರದಲ್ಲೇ