ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯಾಂಕಿನಲ್ಲಿ ಹಣ ಇಡಿ ಅಂತಾರೆ. ಹಣ ಹೂಡಿಕೆ ಮಾಡಿದ್ರೆ ನೀರವ್ ಮೋದಿ ಅಂಥವರು ಲೂಟಿ ಮಾಡ್ತಾರೆ. ಆದರೆ, ಮೋದಿ ಅವರು ಇದರ ಬಗ್ಗೆ ಬಾಯಿ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.