ಬೆಂಗಳೂರು : ಕರ್ನಾಟಕ ಹೈಕೋರ್ಟ್ಗೆ ಮುಖ್ಯನ್ಯಾಯಮೂರ್ತಿಗಳನ್ನಾಗಿ ರಿತುರಾಜ್ ಅವಸ್ಥಿ ಅವರನ್ನು ನೇಮಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಸತೀಶ್ ಚಂದ್ರ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ. ರಿತುರಾಜ್ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು. 1960ರಲ್ಲಿ ಹುಟ್ಟಿರುವ ನ್ಯಾ.ರಿತುರಾಜ್ ಅವರು, ಲಖನೌ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿದ್ದು, 1987ರಿಂದ ವಕೀಲಿ ವೃತ್ತಿ ಕೈಗೊಂಡಿದ್ದರು. ಅಲಹಬಾದ್ ಹೈಕೋರ್ಟ್ನ