ಮಹತ್ವಕಾಂಕ್ಷೆಯ ನೀರಾವರಿ ಯೋಜನೆಯಾದ ಮಹದಾಯಿ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಲು ವಿಪಕ್ಷವಾದ ಬಿಜೆಪಿ ಹಿಂದೇಟು ಹಾಕಿದೆ. ಒಂದು ವೇಳೆ ಪ್ರಸ್ತಾಪಿಸಿದಲ್ಲಿ ನಮ್ಮ ಬುಡಕ್ಕೆ ಬರುತ್ತದೆ ಎನ್ನುವ ಬಿಜೆಪಿ ನಾಯಕರ ಆತಂಕಕ್ಕೆ ಕಾರಣವಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಅಧಿವೇಶನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಕೋನರೆಡ್ಡಿ, ಮಹದಾಯಿ ಯೋಜನೆ ಜಾರಿಗೆ ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಬೇಧ ಮರೆತು ಒಂದಾಗಿ ರಾಜ್ಯದ ಹಿತವನ್ನು ರಕ್ಷಿಸಬೇಕು ಎಂದರು. ಮಹದಾಯಿ ವಿಷಯದ ಬಗ್ಗೆ ಯಾರಾದರೂ ಮಾತನಾಡುವುದಿದ್ದರೇ