ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ಗಳನ್ನು ಸೂಚಿಸಲು ಸೂಚಿಸಲಾಗಿದೆ. ಸಂಸ್ಥೆಯ ಅಧಿಕಾರಿಗಳೇಖುದ್ದು ಸ್ಥಳಗಳಿಗೆ ಭೇಟಿ ನೀಡಿ ಈ ವಿಚಾರದಲ್ಲಿಪರಿಶೀಲನೆ ನಡೆಸಿ ಸೂಕ್ತವಾಗಿ ಸ್ಪಂದಿಸುತ್ತಾರೆ ಎಂದು ಕೆಎಸ್ಆರ್ಟಿಸಿ ಸಂಸ್ಥೆಯ ನಿರ್ದೇಶಕ ಶಿವಯೋಗಿ.ಸಿ ಕಳಸದ್.ಪರಿಷತ್ ಚುನಾವಣಾ ಹಿನ್ನೆಲೆ ಪರಿಶೀಲನೆಗೆ ಆಗಮಿಸಿದ್ದ ಅವರು ಜಿಲ್ಲಾ ಕೇಂದ್ರರಾಮನಗರದ ಬಸ್ ನಿಲ್ದಾಣ, ವಿಭಾಗೀಯ ಕಚೇರಿಗೆ ಭೇಟಿ ನೀಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿಜಿಲ್ಲೆಯಲ್ಲಿ ಬಸ್ಗಳು ಸೌಕರ್ಯವಾಗುತ್ತಿಲ್ಲ, ಜಿಲ್ಲೆಯಲ್ಲಿ 3500 ಪಾಸ್ಗಳನ್ನು ವಿತರಿಸಲಾಗಿದೆ. ಆದರೆ 40 ಬಸ್ಗಳು ಮಾತ್ರ ಸಂಚರಿಸುತ್ತವೆ.