ಈ ಹಿಂದೆ ಪ್ರಧಾನಿಯಾಗಿದ್ದಾಗ ಹೆಚ್. ಡಿ. ದೇವೆಗೌಡರು ಉತ್ತರ ಕರ್ನಾಟಕ್ಕೆ ಅನ್ಯಾಯ ಮಾಡಿದರು. ಈಗ ಅವರ ಮಗ ರಾಜ್ಯದ ಮುಖ್ಯಮಂತ್ರಿಯಾಗಿ ಮೊದಲನೆ ಬಜೆಟ್ನಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸುವ ಮೂಲಕ ತಂದೆಯ ಉತ್ತರ ಕರ್ನಾಟಕ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರೆಸಿದ್ದಾರೆ ಎಂದು ಮಾಜಿ ಪ್ರಧಾನಿ ದೇವೆಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಸಂಸದ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.