ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಗೆ ನೋಟಿಸ್ ನೀಡಲಾಗಿದೆ. ಎಐಸಿಸಿ ಶಿಸ್ತು ಸಮಿತಿಯಿಂದ ಈ ನೋಟಿಸ್ ನೀಡಲಾಗಿದ್ದು, 10 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಹರಿಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ.ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ