ನಕಲಿ ವಿಳಾಸ ನೀಡಿ ಕಳಪೆ ಗುಣಮಟ್ಟದ ಕೀಟನಾಶಕವನ್ನು ತಯಾರಿಸಿ ಮಾರಾಟ ಮಾಡಿ ರೈತರಿಗೆ ವಂಚಿಸುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಗಂಗಾವತಿ ತಾಲೂಕಿನ ಕೃಷಿ ಇಲಾಖೆ ಜಾರಿದಳ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗಂಜ್ ಪ್ರದೇಶದಲ್ಲಿರುವ ಕೀಟನಾಶಕ ಮಾರಾಟ ಅಂಗಡಿ ಮೇಲೆ ದಾಳಿ ಮಾಡಿ, ವಂಚನೆ ಪ್ರಕರಣವನ್ನು ಬಯಲಿಗೆಳೆದಿದೆ. ತಕ್ಷಣಕ್ಕೆ ನಕಲಿ ಕೀಟನಾಶಕ ದಾಸ್ತಾನು ಕಂಡು ಬಂದಿರಲಿಲ್ಲ. ಆದರೆ ಮಾರಾಟದ ದಾಖಲೆಗಳನ್ನು ಪರಿಶೀಲಿಸಿದಾಗ ಅಧಿಕಾರಿಗಳಿಗೆ ಅನುಮಾನ ಬಂದಿತ್ತು. ಅಂಗಡಿ