ನಡುರಸ್ತೆಯಲ್ಲಿ ವೃದ್ಧೆಯೊಬ್ಬರ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ರಸ್ತೆ ಅಗಲೀಕರಣ ವೇಳೆ ಮನೆ, ಗುಡಿಸಲು, ಕಳೆದುಕೊಂಡಿದ್ದವರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಹೀಗಂತ ಆರೋಪಿಸಿ ಸ್ಥಳೀಯರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಚಾಮರಾಜನಗರದ ಉಪ್ಪಾರ ಸಮುದಾಯ ಹಾಗೂ ನಾಯಕ ಜನಾಂಗವಿರುವ ಫುಟ್ಪಾತ್ನ ಜೋಪಡಿಯೊಂದರಲ್ಲಿ ಮನೆ ಕಳೆದುಕೊಂಡ ವೃದ್ಧೆಯೊಬ್ಬರು ತಡರಾತ್ರಿ ಸಾವಿಗೀಡಾಗಿದ್ದಾರೆ. ಸರ್ಕಾರದಿಂದ ಸೂಕ್ತ ಪರಿಹಾರ ಇನ್ಯಾವಾಗ ನೀಡುತ್ತೀರಿ? ಎಂದು ಆಕ್ರೋಶ ವ್ಯಕ್ತಪಡಿಸಿ, ಶವವನ್ನು ಎಲ್ಲಿ ಇಟ್ಟುಕೊಳ್ಳಬೇಕು