ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಕೇವಲ 7 ದಿನದ ತರಾತುರಿಯ ಅಧಿವೇಶನ ಇದಾಗಲಿದೆ. ಹೀಗಾಗಿ ರಾಜ್ಯಪಾಲರ ಭಾಷಣಕ್ಕೆ ವಂದನೆ ನಿರ್ಣಯ ಕೈಗೊಳ್ಳುವ ಸಮಯದಲ್ಲೇ ಆದಷ್ಟು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ತೀರ್ಮಾನಿಸಿವೆ. ಕೇವಲ 7 ದಿನಗಳಲ್ಲಿ ರಾಜ್ಯದ ಬರ ಪರಿಸ್ಥಿತಿ ಸೇರಿದಂತೆ ಗಂಭೀರ ವಿಷಯಗಳ ಚರ್ಚೆ ಹಾಗೂ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಇದರ ನಡವೆ ವಿಪಕ್ಷಗಳು ರಾಜ್ಯದ ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳ