ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗ್ತಾ ಇದೆ ಕೆಲವೇ ತಿಂಗಳುಗಳಲ್ಲಿ ಚುನಾವಣೆ ದಿನಾಂಕ ಕೂಡ ನಿಗದಿ ಆಗಲಿದೆ. ಇಂತಹ ಸಂದರ್ಭದಲ್ಲಿ ಬಿಬಿಎಂಪಿ ಬೆಂಗಳೂರಿನಲ್ಲಿ ಆಪರೇಷನ್ ಬುಲ್ಡೋಜರ್ ಸುಳಿವನ್ನು ನೀಡಿದ್ದು ಮತ್ತೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲು ಮುಂದಾಗಿದೆ.