ಅವರು ನಿತ್ಯ ಲಾಠಿ ಹಿಡಿಯುತ್ತಿದ್ದವರು. ಆದರೆ ಕೈಯಲ್ಲಿ ಏಕಾಏಕಿಯಾಗಿ ಹಾರೆ ಹಿಡಿದಿದ್ದರು. ಲಾಠಿ ಹಿಡಿಯುವ ಕೈ ಹಾರೆ ಹಿಡಿದಿರುವುದನ್ನು ಕಂಡು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.ಲಾಠಿ ಹಿಡಿಯುವ ಕೈ ಹಾರೆ ಹಿಡಿದು ರಸ್ತೆ ಹೊಂಡ ಮುಚ್ಚಿ ಸಾರ್ವಜನಿಕರ ಪ್ರಶಂಸೆ ಗೆ ಪಾತ್ರರಾಗಿರುವ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.ಮಾಣಿ- ಮೈಸೂರ್ ರಸ್ತೆಯ ಪೆರಾಜೆ ಬಳಿ ಸುಳ್ಯ ಠಾಣಾ ಎಸ್ ಐ ಮಂಜುನಾಥ ಅವರು ಹೊಂಡ ಮುಚ್ಚುವ ಕೆಲಸಕ್ಕೆ ಸಾಮಗ್ರಿ