ಹಾಸನ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ದರ್ಶನಕ್ಕೆ ಮೊರೆ ಹೋಗಿರುವ ಪ್ರಜ್ವಲ್, ಹೊಳೆನರಸೀಪುರದ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ, ಮನೆ ದೇವರು ಹರದನಹಳ್ಳಿ ಶಿವನ ದೇವಾಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ದೇವಸ್ಥಾನಗಳಲ್ಲಿ ಬಿ ಫಾರ್ಮ್ ಗೆ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ ಆ ಬಳಿಕ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ತೆರಳಲಿದ್ದಾರೆ. ಪ್ರಜ್ವಲ್ ಗೆ