ರಾಜ್ಯದ ವಿವಿಧೆಡೆ ಮಳೆಯು ಸುರಿಯುತ್ತಿದೆ. ಹಲವೆಡೆ ಭಾರಿ ಅನಾಹುತ ಆಗುವಂತೆ ಮಳೆರಾಯ ತನ್ನ ಆರ್ಭಟ ತೋರುತ್ತಿದ್ದಾನೆ. ಕೆಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಆದರೆ ಆ ಜಿಲ್ಲೆಯಲ್ಲಿ ಮಳೆರಾಯ ಮುನಿಸಿಕೊಂಡಿದ್ದಾನೆ. ಹೀಗಾಗಿ ಮಳೆಗಾಗಿ ಪ್ರಾರ್ಥಿಸಿ ಆ ಊರಿನ ಗ್ರಾಮಸ್ಥರು ಮದುವೆ ಮಾಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ಮಾತ್ರ ಮಳೆಯ ಸಿಂಚನವಿಲ್ಲ. ಇದರಿಂದ ವರುಣದೇವ ಮುನಿಸಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಕತ್ತೆಗಳಿಗೆ ಮದುವೆ ಮಾಡಿದ್ದಾರೆ. ಹೀಗೆ ಮಾಡುವುದರಿಂದ ಮಳೆ ಬರುತ್ತದೆ