ರಾಜ್ಯದ ವಿವಿಧೆಡೆ ಮಳೆಯು ಸುರಿಯುತ್ತಿದೆ. ಹಲವೆಡೆ ಭಾರಿ ಅನಾಹುತ ಆಗುವಂತೆ ಮಳೆರಾಯ ತನ್ನ ಆರ್ಭಟ ತೋರುತ್ತಿದ್ದಾನೆ. ಕೆಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಆದರೆ ಆ ಜಿಲ್ಲೆಯಲ್ಲಿ ಮಳೆರಾಯ ಮುನಿಸಿಕೊಂಡಿದ್ದಾನೆ. ಹೀಗಾಗಿ ಮಳೆಗಾಗಿ ಪ್ರಾರ್ಥಿಸಿ ಆ ಊರಿನ ಗ್ರಾಮಸ್ಥರು ಮದುವೆ ಮಾಡಿಸಿದ್ದಾರೆ.