ಬೆಳಗಾವಿ : ಪ್ರೀತಿಸಲು ನಿರಾಕರಿಸಿದ್ದಕ್ಕೆ ಪಟ್ಟಣದಲ್ಲಿ ಭಾನುವಾರ 16 ವರ್ಷದ ಬಾಲಕಿಯನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅಮೀರ ಲಾಲಸಾಬ ಜಮಾದಾರ (19) ಕೊಲೆ ಮಾಡಿದ ಆರೋಪಿ. ಬಾಲಕಿಯು ತನ್ನ ಇಬ್ಬರು ತಂಗಿಯರ ಜತೆ ಪಟ್ಟಣದ ಶ್ರೀ ಕರೆ ಸಿದ್ದೇಶ್ವರ ದೇವಸ್ಥಾನದಲ್ಲಿ ಭಾನುವಾರ ಏರ್ಪಡಿಸಿದ್ದ ಜಾತ್ರೆಗೆ ಬಂದಿದ್ದಳು. ಮಧ್ಯಾಹ್ನ ಊಟ ಮಾಡಿ, ಪಟ್ಟಣದ ವಡಕಿ ತೋಟದ ಮನೆಗೆ ತೆರಳುತ್ತಿದ್ದಾಗ, ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಪೀಡಿಸಿದ್ದಾನೆ. ಮನೆಗೆ ಹೋಗಿ