ಹೈ.ಕ. ಪ್ರದೇಶದ ಆರು ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಆರು ಜಿಲ್ಲೆಗಳ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಸಭೆ ಕರೆದು ಚರ್ಚಿಸಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷ ತಿಳಿಸಿದ್ದಾರೆ.ಕಲಬುರಗಿಯ ಹೆಚ್.ಕೆ.ಆರ್.ಡಿ.ಬಿ. ಕಚೇರಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ರಾಜಶೇಖರ ಬಿ. ಪಾಟೀಲ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. 2018-19ನೇ ಸಾಲಿನ ಕ್ರಿಯಾ ಯೋಜನೆ ರೂಪಿಸಲು ಎಲ್ಲ ಜಿಲ್ಲೆಗಳಿಗೆ ಮಂಡಳಿಯಿಂದ ತಿಳಿಸಲಾಗಿದೆ.