ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆದವರಿಗೆ ತಾಳ್ಮೆ ಇರಬೇಕು, ಎಲ್ಲರಿಗೂ ಉತ್ತರಿಸುವ ಸೌಜನ್ಯ ಇರಬೇಕು. ಆದರೆ ಈ ಮುಖ್ಯಮಂತ್ರಿಗೆ ಅದು ಯಾವುದೂ ಇಲ್ಲ. ಹೀಗಾಗಿ ಇವರು ಹೆಚ್ಚು ದಿನ ಅಧಿಕಾರದಲ್ಲಿ ಇರಲ್ಲ ಎಂದು ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.