ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಧಾರಾಕಾರ ಮಳೆಗೆ ರಾಜ್ಯದ ಹಲವೆಡೆ ಸಂಕಷ್ಟ ಎದುರಾಗಿದೆ. ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಬೆಂಗಳೂರಿನ ಪ್ರಸಿದ್ಧ ಅಣ್ಣಮ್ಮ ದೇಗುಲಕ್ಕೂ ಮಳೆಯ ನೀರು ನುಗ್ಗಿದೆ. ಈ ಮಧ್ಯೆ, ಮಳೆ ಇಷ್ಟಕ್ಕೆ ನಿಲ್ಲುವುದಿಲ್ಲ ಮತ್ತಷ್ಟು ದಿನ ಮಳೆಯ ರುದ್ರನರ್ತನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.