ಬೆಂಗಳೂರು : ಬಜೆಟ್ ಅಧಿವೇಶನದ ಮೂರನೇ ದಿನ ಎರಡೂ ಪಕ್ಷಗಳ ಸದಸ್ಯರು ತಮ್ಮ ಹತೋಟಿಯನ್ನು ಕಳೆದುಕೊಂಡು ಕೂಗಾಟದಲ್ಲಿ ತೊಡಗಿದ್ದ ಕಾರಣ ಸುಮಾರು ಒಂದು ತಾಸುಗಳ ಕಾಲ ಮಾರುಕಟ್ಟೆಯ ವಾತಾವರಣ ಉಂಟಾಗಿತ್ತು. ಪ್ರತಿಪಕ್ಷ ನಾಯಕ ಆರ್. ಅಶೋಕ್ ಭಾಷಣದ ವೇಳೆ ನಡೆದ ರಾಮಮಂದಿರದ ಪ್ರಸ್ತಾಪ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು. ರಾಜ್ಯಪಾಲರ ಭಾ಼ಷಣದ ಮೇಲಿನ ವಂದನಾ ನಿರ್ಣಯವನ್ನು ಅರ್ಪಿಸುವ ವೇಳೆ ಪ್ರಾಸ್ತಾವಿಕವಾಗಿ ಅಯೋಧ್ಯೆ ರಾಮಮಂದಿರ ನೀಡಿದ್ದ ಆಹ್ವಾನವನ್ನೂ ಕಾಂಗ್ರೆಸ್ ತಿರಸ್ಕರಿಸಿತ್ತು ಎಂದರು. ಇದಕ್ಕೆ ಕೆರಳಿದ ಸಚಿವ ಪ್ರಿಯಾಂಕ್ ಖರ್ಗೆ ರಾಷ್ಟ್ರಪತಿಯವರಿಗೇ ನೀವು ಆಹ್ವಾನ ನೀಡಿರಲಿಲ್ಲ ಎಂದು ಟೀಕಿಸಿದರು.