ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಅಸಮಧಾನಗೊಂಡಿರುವ ರಮೇಶ ಜಾರಕಿಹೊಳಿ ಅವರ ಮುಂದಿನ ನಡೆ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಅವರು ಬಿಜೆಪಿಯತ್ತ ಮುಖಮಾಡಿದ್ದಾರೆ ಎಂಬ ಮಾತುಗಳು ಹರಿದಾಡಲಾರಂಭಿಸಿವೆ.