ಗಣಿಧಣಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ಆಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮಧ್ಯರಾತ್ರಿವರೆಗೆ ವಿಚಾರಣೆಗೆ ಒಳಪಡಿಸಲಾಗಿತ್ತು. ಇಂದು ಬೆಳಿಗ್ಗೆ 9 ರಿಂದ ವಿಚಾರಣೆ ಮುಂದುವರೆಸಿದ್ದ ಡಿಸಿಪಿ ಗಿರೀಶ್ ನೇತೃತ್ವದ ತನಿಖಾಧಿಕಾರಿಗಳ ತಂಡ, ಡೀಲ್ ಪ್ರಕರಣದ ಪೂರಕ ದಾಖಲೆಗಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ರೆಡ್ಡಿ ಅವರನ್ನು ಬಂಧಿಸಿದರು. ಶೀಘ್ರವೇ ನ್ಯಾಯಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಸಿಸಿಬಿಯ ಹಿರಿಯ ಅಧಿಕಾರಿಗಳು