ತುಮಕೂರು ;ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ತುಮಕೂರು ಜಿಲ್ಲೆ ತಾಲೂಕು ಹಿಂದುಳಿದ ವರ್ಗಗಳ ಸಮಾಜ ಕಲ್ಯಾಣಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಗೀತಮ್ಮ ಅಮಾನತಾದ ಅಧಿಕಾರಿಯಾಗಿದ್ದು, ಕರ್ತವ್ಯ ಲೋಪದ ಆರೋಪದಡಿಯಲ್ಲಿ ಇಲಾಖೆ ಆಯುಕ್ತ ಕೆ.ಎ.ದಯಾನಂದ ಈ ಆದೇಶ ಹೊರಡಿಸಿದ್ದಾರೆ.ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ ಅಕ್ಕಿ ಪೂರೈಸಲು ಮೂರು ದಿನಗಳ ಹಿಂದಷ್ಟೇ ಮಠದಿಂದ ಅಕ್ಕಿ ಸಾಲ ಪಡೆದಿರುವ ಬಗ್ಗೆ ಸಿದ್ದಗಂಗಾ ಮಠದ ಆಡಳಿತಾಧಿಕಾರಿಗಳು ಸ್ಪಷ್ಟನೆ ನೀಡಿದ್ದರು.ಈ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.