ಮೈಸೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಿರ್ಗಮಿಸುವ ಮುನ್ನ ಮೈಸೂರು ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಜೊತೆಗಿನ ಜಟಾಪಟಿ ಬಳಿಕ ಇಬ್ಬರೂ ಅಧಿಕಾರಿಗಳನ್ನೂ ಸರ್ಕಾರ ವರ್ಗಾವಣೆ ಮಾಡಿ ವಿವಾದಕ್ಕೆ ಅಂತ್ಯ ಹಾಡಿತ್ತು. ಈ ನಡುವೆ ಸಿಎಂ ಭೇಟಿಯಾದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡದಂತೆ ಮನವಿ ಮಾಡಿದ್ದರು. ಕೊರೋನಾ ವಿರುದ್ಧದ ಹೋರಾಟದಲ್ಲಿ ತಮ್ಮ ಕೆಲಸ ಅರ್ಧಕ್ಕೇ ಬಾಕಿಯಾದಂತಾಗುತ್ತದೆ.