ಪ್ರಭುತ್ವ ದಾರಿತಪ್ಪಿದಾಗ ಸರಿಪಡಿಸುವ ಜವಾಬ್ದಾರಿ ಸಂತರದ್ದಾಗಿದೆ. ಸಂತರೆಲ್ಲರೂ ಒಟ್ಟಾಗುತ್ತಿರುವುದು, ಗೋವಿಗಾಗಿ ಸಂತರೆಲ್ಲರೂ ಧ್ವನಿಗೂಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ವ್ಯಾಪಾರಧ ಆಧಾರಮೇಲೆ ಗೋಹತ್ಯೆ ನಡೆಯುತ್ತಿದೆ, ನಾವು ವ್ಯಾಪಾರದ ಆಧಾರದ ಮೇಲೆ , ಗೋವಿಗೆ ಮೌಲ್ಯ ತಂದುಕೊಡುವುದರ ಮೂಲಕ ಗೋವನ್ನು ಸಂರಕ್ಷಿಸಬೇಕಿದೆ. ಸಂಸತ್ತು, ಸಂಪತ್ತು ಹಾಗೂ ಸಂಘರ್ಷದ ಮೂಲಕ ಗೋವನ್ನು