ಪ್ರವಾಹದಿಂದ ಬೆಳೆ, ಬದುಕು ಕಳೆದುಕೊಂಡ ರೈತಾಪಿ ವರ್ಗ ಅಳಿದುಳಿದ ಜಮೀನಿನ ಬೆಳೆಯಲ್ಲೇ ಸೀಗೆ ಹುಣ್ಣಿಮೆ ಆಚರಿಸಿದ್ದು, ಜಮೀನಿನ ಪರಿಸ್ಥಿತಿ ಕಂಡು ಹಬ್ಬದಲ್ಲೂ ಕಣ್ಣೀರು ಹಾಕಿದ್ದಾರೆ.ಧಾರವಾಡ ಜಿಲ್ಲೆಯ ಕೆಲಭಾಗಗಳಲ್ಲಿ ರೈತ ಸಮೂಹ ಸೀಗೆ ಹುಣ್ಣಿಮೆಯನ್ನು ಶ್ರದ್ಧಾ-ಭಕ್ತಿಗಳೊಂದಿಗೆ ಸಂಭ್ರಮದಿಂದ ಆಚರಿಸಿತು. ಈ ಬಾರಿ ಮಳೆಯಿಂದಾಗಿ ರೈತ ಸಮೂಹ ತೀವ್ರ ಸಂಕಷ್ಟದಲ್ಲಿದೆ. ಆದರೂ ಕೂಡ ಸಂಪ್ರದಾಯವನ್ನು ಕೈಬಿಡಬಾರದೆಂಬ ಉದ್ದೇಶದಿಂದ ರೈತರು ಭೂದೇವಿಯ ಆರಾಧನೆಯಲ್ಲಿ ನಿರತವಾಗಿ ವಿಶೇಷವಾಗಿ ಗಮನ ಸೆಳೆದರು. ವಿಜಯದಶಮಿಯ ಬಳಿಕ ಬರುವ ಸೀಗೆ ಹುಣ್ಣಿಮೆಗೆ