ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರ ಗೋಕರ್ಣ ಹಾಗೂ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಾವಿರಾರು ಭಕ್ತರು ಶಿವರಾತ್ರಿ ಉತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿ ಶಿವನ ದರ್ಶನ ಪಡೆದರು.ಗೋಕರ್ಣದಲ್ಲಿ ಸೋಮವಾರ ಮಧ್ಯರಾತ್ರಿಯಿಂದಲೇ ಸೇರಿದ್ದ ಭಕ್ತರು, ಸಮುದ್ರ, ಕೋಟಿತೀರ್ಥದಲ್ಲಿ ಸ್ನಾನ ಮಾಡಿ ಮಹಾಬಲೇಶ್ವರ ದೇವರ ಸನ್ನಿಧಿಯಲ್ಲಿ ಸಾಲುಗಟ್ಟಿ ನಿಂತ ಭಕ್ತರು ಮಹಾಗಣಪತಿ ಮತ್ತು ಮಹಾಬಲೇಶ್ವರನಿಗೆ ಪೂಜೆ ಅರ್ಪಿಸಿದರು.ಸ್ಥಳೀಯರು ಬೆಳಗ್ಗೆ ಆತ್ಮಲಿಂಗದ ದರ್ಶನ