ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕರಾಳ ದಿನದ ಶಾಕ್ ನೀಡಲು ಕೆಲವು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಬೆಂಗಳೂರು ಬಂದ್ ಕೈ ಬಿಟ್ಟರೂ, ಮಹದಾಯಿ ಹೋರಾಟ ಮಾತ್ರ ನಿಂತಿಲ್ಲ. ಕರಾಳ ದಿನ ಆಚರಣೆ ನೆಪದಲ್ಲಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಲು ಪ್ರತಿಭಟನಾಕಾರರು ಪ್ಲ್ಯಾನ್ ಮಾಡಿದ್ದಾರೆ.