ಮಂಡ್ಯ : ಹೆಚ್ ಡಿ ಕುಮಾರಸ್ವಾಮಿಯ ಮೇಲೆ ಆರೋಪ ಮಾಡಿದ ಚಲುವರಾಯಸ್ವಾಮಿ ವಿರುದ್ಧ ಮಾಜಿ ಸಚಿವ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರು ಯಾವ ಪಕ್ಷ ಎಂದು ಹೇಳಬೇಕು. ಹಗಲು ಸಿದ್ದರಾಮಯ್ಯ ಅವರ ಪಕ್ಕ ಕುಳಿತುಕೊಂಡು ಯಡಿಯೂರಪ್ಪ ಅವರನ್ನು ಬೈಯುತ್ತಾರೆ. ರಾತ್ರಿ ಯಡಿಯೂರಪ್ಪ ಅವರ ಜೊತೆ ಕೂತು ಊಟ ಮಾಡುತ್ತಾರೆ. ಚಲುವರಾಯಸ್ವಾಮಿ ಮೊದಲು ಯಾವ ಪಕ್ಷ ಎಂದು ಗುರುತಿಸಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ದೇವೇಗೌಡರು ಮತ್ತು ಅವರ