ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೂ ಮುನ್ನವೇ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನಡುವೆ ಮಾತಿನ ಚಕಮಕಿ ನಡೆದಿದೆ. ಗೋವಿಂದರಾಜು ಡೈರಿ ಚರ್ಚೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು. ಬಿಜೆಪಿಯವರು ಬರ ಚರ್ಚೆಗೆ ಆಸ್ಪದ ಕೊಡದೇ, ಡೈರಿ ಚರ್ಚೆರೆಗೆ ಆಗ್ರಹಿಸಿ ಧರಣಿ ನಡೆಸಿದ್ದರು. ಜನರು ಕಿಡಿಕಾರಿದ ಬಳಿಕ ಧರಣಿ ಕೈಬಿಟ್ಟಿದ್ದಾರೆ. ಅಧಿಕಾರದಲ್ಲಿದ್ದಾಗ ಬಿಜೆಪಿ ನಾಯಕರು ರಾಜ್ಯವನ್ನ ಲೂಟಿ ಹೊಡೆದಿದ್ದಾರೆ. ಬಿಜೆಪಿ ನಾಯಕರಿಗೆ ಮಾನ- ಮರ್ಯಾದೆ ನಾಚಿಕೆ ಇಲ್ಲ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.