ಬೆಂಗಳೂರು: ಸದಾ ರಾಜಕೀಯ ಚಟುವಟಿಕೆಯಲ್ಲಿ ಬ್ಯುಸಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹತ್ತು ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ನಗರದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದ ಅವರು ಮಂಗಳವಾರ ಡಿಸ್ಚಾರ್ಜ್ ಅಗಲಿದ್ದಾರೆ. ಇದೀಗ ಮತ್ತೆ ಲವಲವಿಕೆಯಿಂದ ಇರುವ ಸಿದ್ದರಾಮಯ್ಯ ರಾಜಕೀಯ ಅಖಾಡದಲ್ಲಿ ಸಕ್ರಿಯರಾಗಲು ಸಜ್ಜಾಗಿದ್ದಾರೆ.