ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಣ ಜಟಾಪಟಿಗೂ ಕಾರಣವಾಗಿತ್ತು. ರಾಜ್ಯದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಣ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು.