ಕರ್ನಾಟಕ ರಾಜ್ಯದ 19ನೇ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಥಾವರಚಂದ್ ಗೆಹಲೋತ್ ಇಂದು ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿ ಮನೆಯಲ್ಲಿ ನಡೆದ ಸರಳದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಹೈಕೋರ್ಟ್ ಸಿಜೆ ಎ.ಎಸ್.ಒಕಾ ಪ್ರತಿಜ್ಞಾವಿಧಿ ಬೋಧಿಸಿದರು. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್, ನಾನು ಶ್ರದ್ಧಾಪೂರ್ವಕವಾಗಿ