ಬಡವರಿಗೆ ಹಾಗೂ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಹಿಂದೆ ಅನುಷ್ಠಾನ ಮಾಡಿದ್ದ ಒಂಟಿ ಮನೆ ಯೋಜನೆಯನ್ನು ಪುನರ್ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಕುರಿತ ಆದೇಶ ಶೀಘ್ರವಾಗಿ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.