ಬಡವರಿಗೆ ಹಾಗೂ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಹಿಂದೆ ಅನುಷ್ಠಾನ ಮಾಡಿದ್ದ ಒಂಟಿ ಮನೆ ಯೋಜನೆಯನ್ನು ಪುನರ್ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಕುರಿತ ಆದೇಶ ಶೀಘ್ರವಾಗಿ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ಚಿಕ್ಕಪೇಟೆ ವಿಧಾನ ಸಭಾ ಕ್ಷೇತ್ರದ-100 ಯೋಜನೆ ಕಾಮಗಾರಿಯ ವೀಕ್ಷಣೆ, ನವೀಕರಣಗೊಂಡಿರುವ ಬೈರಸಂದ್ರ ಕೆರೆ ಹಾಗೂ ಧರ್ಮರಾಯಸ್ವಾಮಿ ದೇವಸ್ಥಾನ ವಾರ್ಡ್ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಎಂ.ಎಸ್. ಬಹುಮಹಡಿ ವಸತಿ