ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆ ಕಳೆದ ವರ್ಷವೇ ಜಾರಿಗೆ ಬಂದಿರುವ ಏಕ ಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಇಂದಿನಿಂದಲೇ ಕಟ್ಟುನಿಟ್ಟಾಗಿ ಆಚರಣೆಗೆ ತರಲು ಬಿಬಿಎಂಪಿ ತೀರ್ಮಾನಿಸಿದೆ. ವಾರದ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ವಿಭಾಗದ ಸಭೆ ನಡೆದಿದ್ದು, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಒಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಮತ್ತು 10 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್