ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 40 ದಿನ ಕಳೆದಿದೆ. ಭಾನುವಾರ, ಸರ್ಕಾರಿ ರಜೆ, ದೀಪಾವಳಿ ರಜೆ ಸಂದರ್ಭದಲ್ಲಿಯೂ ನಿರಂತರವಾಗಿ ಹುಡುಕಾಟ ನಡೆಸಿದರೂ ಹಂತಕರ ಸುಳಿವು ಮಾತ್ರ ಪತ್ತೆಯಾಗಿಲ್ಲ. ಅಧಿಕಾರಿಗಳಿಗೆ ಕೇವಲ ಬಿಟ್ಟಿ ಸಲಹೆಗಳು ಬಿಟ್ಟರೆ ಹಂತಕರ ಪತ್ತೆಗೆ ನಿಖರ ಸುಳಿವು ಸಾರ್ವಜನಿಕರಿಂದ ಸಿಕ್ಕಿಲ್ಲ. ಕಳೆದ ವಾರ ಎಸ್ಐಟಿ ತಂಡ ಮೂವರು ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿತ್ತು. 100ಕ್ಕೂ ಅಧಿಕ ಅಧಿಕಾರಿಗಳು ಹಂತಕರ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ