ಕಾಂಗ್ರೆಸ್ ನ ಕೆಲವು ನಾಯಕರು ಬಿಜೆಪಿಯ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವ ಬೆನ್ನಲ್ಲೇ, ನನಗೂ ಎಸ್ ಎಂ ಕೆ ಕರೆ ಮಾಡಿದ್ದರು ಅಂತ ಗೃಹ ಸಚಿವರು ಹೊಸ ಬಾಂಬ್ ಸಿಡಿಸಿದ್ದಾರೆ.ವಿಧಾನಸೌಧದಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ವ್ಯತ್ಯಾಸವಿದೆ. ಪುಲ್ವಾಮ ಸೇರಿ ಇತರ ಅವಕಾಶಗಳು ಬಿಜೆಪಿ ಯಶಸ್ವಿಗೆ ಕಾರಣವಾಗಿವೆ. ಸೋಲಿಗೆ ಯಾವುದೇ ಕಾರಣಗಳಿರಬಹುದು. ಆದರೆ ಜನರ ತೀರ್ಪನ್ನ ನಾವು ಒಪ್ಪಿಕೊಳ್ಳಬೇಕು ಎಂದರು. ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು.